




ಕೊಪ್ಪಳ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಪ್ರತಿ ಅನೇಕ ಭಕ್ತಗಣ ವಿವಿಧ ರೀತಿಯ ದಾನ್ಯ, ತರಕಾರಿ ಮುಂತಾದ ದಾಸೋಹ ಸೇವೆಯನ್ನು ಮಹಾದಾಸೋಹಕ್ಕೆ ಸಲ್ಲಿಸುವುದು ಭಕ್ತರ ಸಂಪ್ರದಾಯ. ಕುಷ್ಟಗಿ ತಾಲೂಕಿನ ಹನುಮನಾಳ್ ಗ್ರಾಮದ ಸದ್ಭಕ್ತರಿಂದ ಈ ವರ್ಷದ ಜಾತ್ರಾ ಮಹಾದಾಸೋಹಕ್ಕೆ 10 ಕ್ವಿಂಟಾಲ್ ಹುಣಸೆ ಚಟ್ನಿಯನ್ನು ಸಲ್ಲಿಸುತ್ತಿದ್ದಾರೆ. ದಾನಿಗಳ ಸೇವೆಯನ್ನು ಶ್ರೀಗವಿಮಠವು ಸ್ಮರಿಸುತ್ತದೆ ಎಂದು ಶ್ರೀ ಗವಿಮಠದ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್