
ನವದೆಹಲಿ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರ ಪುಣ್ಯತಿಥಿಯಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅವರಿಗೆ ಗೌರವ ಸಲ್ಲಿಸಿದರು.
ನರಸಿಂಹ ರಾವ್ ಅವರ ನೇತೃತ್ವದಲ್ಲಿ ಭಾರತವು ಆರ್ಥಿಕ ಸುಧಾರಣೆಗಳ ದಿಕ್ಕಿನಲ್ಲಿ ಪರಿವರ್ತನಾತ್ಮಕ ಹಂತವನ್ನು ಪ್ರವೇಶಿಸಿತು. ಈ ಸುಧಾರಣೆಗಳು ದೇಶದ ಸಮಗ್ರ ಅಭಿವೃದ್ಧಿಗೆ ಬಲಿಷ್ಠ ಅಡಿಪಾಯವನ್ನು ಹಾಕಿದವು ಎಂದು ಖರ್ಗೆ ಅವರು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಹೇಳಿದರು.
ಅವರ ಆಡಳಿತಾವಧಿಯಲ್ಲಿ ಭಾರತದ ಪರಮಾಣು ಕಾರ್ಯಕ್ರಮವನ್ನು ಮತ್ತಷ್ಟು ಬಲಪಡಿಸಲಾಯಿತು. ಜೊತೆಗೆ ವಿದೇಶಾಂಗ ನೀತಿ ಕ್ಷೇತ್ರದಲ್ಲಿ ಹಲವು ಐತಿಹಾಸಿಕ ಸಾಧನೆಗಳು ನಡೆದವು ಎಂದು ಖರ್ಗೆ ಹೇಳಿದ್ದಾರೆ. ‘ಲುಕ್ ಈಸ್ಟ್’ ನೀತಿಯ ಆರಂಭವು ಭಾರತದ ರಾಜತಾಂತ್ರಿಕ ದಿಕ್ಕಿನಲ್ಲಿ ಮಹತ್ವದ ಮೈಲುಗಲ್ಲಾಗಿ ಪರಿಣಮಿಸಿತು ಎಂದು ಅವರು ಹೇಳಿದರು.
ದೇಶದ ಸಮೃದ್ಧಿ ಮತ್ತು ಅಭಿವೃದ್ಧಿಯನ್ನು ಗಟ್ಟಿಗೊಳಿಸುವಲ್ಲಿ ಪಿ.ವಿ. ನರಸಿಂಹ ರಾವ್ ಅವರ ಪಾತ್ರ ಶಾಶ್ವತವಾಗಿದ್ದು, ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa