
ಕಲಬುರಗಿ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದ್ವೇಷ ಭಾಷಣ ವಿರುದ್ಧದ ವಿಧೆಯಕದ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧ್ವೇಷ ಭಾಷಣ ಕಾಯ್ದೆ ಇದೊಂದು ದಮನಕಾರಿ ಕಾನೂನು. ದ್ವೇಷ ಭಾಷಣ ಅಂದರೆ ಏನು ಎನ್ನುವ ವ್ಯಾಖ್ಯಾನ ದೊಡ್ಡ ಪ್ರಮಾಣದಲ್ಲಿ ಮಾಡಿದ್ದಾರೆ. ಯಾರನ್ನು ಯಾವಾಗ ಬೇಕಾದರೂ ಬಂಧಿಸುವ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಯಾರೂ ಇದನ್ನು ಪ್ರಶ್ನೆ ಮಾಡಬಾರದು ಅಂತ ಈ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಚೋದನಕಾರಿಯಾಗಿ ಮಾತನಾಡಿದರೆ ಕ್ರಮಕ್ಕೆ ಈಗಾಗಲೇ ಬಿಎನ್ ಎಸ್ ಕಾಯಿದೆಯಲ್ಲಿ ಇದೆ. ಮತ್ತೆ ವಿಶೇಷ ಕಾನೂನು ತರುವ ಅಗತ್ಯ ಏನಿದೆ ? ಪ್ರತಿ ಪಕ್ಷಗಳು ಸಣ್ಣ ಪುಟ್ಟ ಮಾತನಾಡಿದರೂ ಒಳಗೆ ಹಾಕಬಹುದು ಅಂತ ಈ ಕಾನೂನು ತರುತ್ತಿದ್ದಾರೆ. ತುರ್ತು ಪರಿಸ್ಥಿತಿಯ ಅವಧಿಯಲ್ಲೂ ಹೀಗೆ ಇರಲಿಲ್ಲ. ಇದು ಅಘೋಷಿತ ಅಲ್ಲ ಘೋಷಿತ ಎಮರ್ಜನ್ಸಿ, ನಾನೂ ರಾಜ್ಯಪಾಲರನ್ನು ಭೇಟಿ ಮಾಡುವೆ. ಅಗತ್ಯ ಬಿದ್ದರೆ ಕಾನೂನು ಹೋರಾಟ ಸಹ ಮಾಡುತ್ತೇವೆ. ಕಾನೂನು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ. ಧ್ವೇಷ ರಾಜಕಾರಣ ಮಾಡುತ್ತಿರುವವರ ಕೈಯಲ್ಲಿ ಸದ್ಯ ಅಧಿಕಾರ ಇದೆ. ಹಾಗಾಗಿ ಹೊಸ ಕಾನೂನು ಆತಂಕಕಾರಿ ಎನ್ನುತ್ತಿದ್ದೇವೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa