
ಗದಗ, 24 ಡಿಸೆಂಬರ್ (ಹಿ.ಸ.)
ಆ್ಯಂಕರ್:
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸಂಚಾರದ ವಲಯಗಳಲ್ಲಿನ ಸರ್ಕಾರಿ ಮತ್ತು ಅರೆಸರ್ಕಾರಿ ಸಂಸ್ಥೆಗಳಲ್ಲಿರುವ ಬೀದಿ ನಾಯಿಗಳಿಗೆ ಚುಚ್ಚುಮದ್ದು ಹಾಕಿಸಿ ಮತ್ತು ಸಂತಾಣ ಹರಣ ಶಸ್ತç ಚಿಕಿತ್ಸೆ ಕಾರ್ಯಕ್ರಮವನ್ನು ನಿರ್ವಹಿಸಲಾಗುತ್ತಿದೆ. ಶಸ್ತ್ರ ಚಿಕಿತ್ಸೆ ಮಾಡಿದ ನಂತರ ಬೀದಿ ನಾಯಿಗಳನ್ನು ಆಶ್ರಯ ತಾಣದಲ್ಲಿ ಪೋಷಣೆ ಮಾಡಲು ಆಸಕ್ತಿಯುಳ್ಳವರು ಸ್ವಇಚ್ಚೆಯಿರುವ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಉಚಿತವಾಗಿ ಸೇವೆಯನ್ನು ಸಲ್ಲಿಸಲು ಇಚ್ಚೆಯುಳ್ಳವರು ಪುರಸಭೆಗೆ ಡಿಸೆಂಬರ್ 31 ರೊಳಗಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.
ಮುಂಡರಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳನ್ನು ದತ್ತು ತೆಗೆದುಗೊಂಡು ಪೋಷಣೆ ಮಾಡವರು ಇಚ್ಚೆಯುಳ್ಳವರು ಪುರಸಭೆಯಿಂದ ಅನುಮತಿಯನ್ನು ಪಡೆದುಕೊಂಡು ದತ್ತು ತೆಗೆದುಕೊಳ್ಳಬಹುದಾಗಿದೆ ಎಂದು ಮುಂಡರಗಿ ಪುರಸಭೆ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP