
ಹಾಸನ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವ ಉದ್ದಿಮೆದಾರರು ತಾವು ನಡೆಸುವ ದೈನಂದಿನ ವ್ಯಾಪಾರವನ್ನು ಪಾದಚಾರಿಗಳ ಮಾರ್ಗಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವುದು ಈ ಕಛೇರಿಯ ಗಮನಕ್ಕೆ ಬಂದಿರುತ್ತದೆ ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ತೀವ್ರ ಆಕ್ಷೇಪಣೆ ವ್ಯಕ್ತವಾಗಿರುತ್ತದೆ.
ಇದರಿಂದ ಸಾರ್ವಜನಿಕ ಸ್ಥಳಗಳ ಸ್ವಚ್ಚತೆ ಹಾಗೂ ನಗರ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಕ್ಷಣದಿಂದ ತಾವು ಬೀದಿ ಬದಿಯ ಪಾದಚಾರಿ ಮಾರ್ಗಗಳಲ್ಲಿ ನಡೆಸುತ್ತಿರುವ ವ್ಯಾಪಾರವನ್ನು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಧಕ್ಕೆಯಾಗದಂತೆ ಉದ್ದಿಮೆ ನಡೆಸುವುದು ತಪ್ಪಿದಲ್ಲಿ ಈ ಕಛೇರಿಯಿಂದ ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa