
ನವದೆಹಲಿ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನೀತಿ ಆಯೋಗದಲ್ಲಿ ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞರು, ವಿವಿಧ ವಲಯಗಳ ತಜ್ಞರು ಹಾಗೂ ವಿಷಯ ಪರಿಣಿತರು ಭಾಗವಹಿಸಿ ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಹಾಗೂ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಉಪಸ್ಥಿತರಿದ್ದರು.
ಮೂಲಗಳ ಪ್ರಕಾರ, ಸಭೆಯಲ್ಲಿ ಅರ್ಥಶಾಸ್ತ್ರಜ್ಞರು, ವಲಯ ತಜ್ಞರು ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪ್ರತಿನಿಧಿಗಳು 2026–27ರ ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ತಮ್ಮ ನಿರೀಕ್ಷೆಗಳು ಹಾಗೂ ಸಲಹೆಗಳನ್ನು ಮಂಡಿಸಿದರು. ದೇಶದ ಆರ್ಥಿಕ ಬೆಳವಣಿಗೆಯ ದಿಕ್ಕು, ಹಣಕಾಸು ನಿರ್ವಹಣೆ, ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಗತ್ಯವಾದ ರಚನಾತ್ಮಕ ಸುಧಾರಣೆಗಳು ಸಭೆಯ ಪ್ರಮುಖ ಚರ್ಚಾ ವಿಷಯಗಳಾಗಿದ್ದವು.
ಇದಲ್ಲದೆ, ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ, ಜಾಗತಿಕ ಆರ್ಥಿಕ ಸವಾಲುಗಳು, ದೇಶೀಯ ಬೇಡಿಕೆಯನ್ನು ಬಲಪಡಿಸುವ ಕ್ರಮಗಳು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾದ ನೀತಿಗಳ ಕುರಿತು ಕೂಡ ಸಮಗ್ರ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa