
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆಯ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿಯ ಚಂದ್ರಬ0ಡ ಮತ್ತು ಜವಾಹರನಗರದ ವಿದ್ಯುತ್ ಉಪ-ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ನಾಳೆ ಬೆಳಗ್ಗೆ 10 ಗಂಟೆಯಿ0ದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್