
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸಿದ್ದಲಿಂಗೇಶ ರಂಗಣ್ಣನವರ್ ತಿಳಿಸಿದ್ದಾರೆ.
ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರು ಕಚೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ. ಪೆನ್ಡ್ರೈವ್ ನಲ್ಲಿ ಅಳವಡಿಸಿ. ಪೆನ್ಡ್ರೈವ್ ನೊಂದಿಗೆ, ಅರ್ಜಿಯನ್ನು ರಿಜಿಸ್ಟ್ರಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ಕಾರ್ಯಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಡಿ.20 ರೊಳಗಾಗಿ ಅರ್ಜಿ ತಲುಪಿಸಬೇಕು.
ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ, ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್ ಡ್ರೈವ್ ಅನ್ನು ಪರಿಶೀಲಿಸಿ, ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅಕಾಡೆಮಿ ಪೇಸ್ಬುಕ್ facebook.com/karnatakasangeetanrutyaaacdemy ನಲ್ಲಿ ಮಾಹಿತಿ ಪಡೆದು ವೆಬ್ಸೈಟ್ sangeetanrityaacademy.karnataka.gov.in ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್