ನಾಳೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಜಾಗೃತಿ ಕಾರ್ಯಾಗಾರ
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕೆ ಕೇಂದ್ರದ ವತಿಯಿಂದ ಆರ್‍ಎಎಂಪಿ ಯೋಜನೆಯಡಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು ವ್ಯಾಪಾರ ಅಭಿವೃದ್ದಿ ಸೇವಾ ಪೂರೈಕೆದಾರರು(ಬಿಡಿಎಸ್‍ಪಿ) ಕುರಿತು ನಗರದ ವಿಜಯನಗರ ಕಾಲೇಜಿನಲ್ಲಿ ನಾಳೆ
ನಾಳೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಜಾಗೃತಿ ಕಾರ್ಯಾಗಾರ


ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕೆ ಕೇಂದ್ರದ ವತಿಯಿಂದ ಆರ್‍ಎಎಂಪಿ ಯೋಜನೆಯಡಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು ವ್ಯಾಪಾರ ಅಭಿವೃದ್ದಿ ಸೇವಾ ಪೂರೈಕೆದಾರರು(ಬಿಡಿಎಸ್‍ಪಿ) ಕುರಿತು ನಗರದ ವಿಜಯನಗರ ಕಾಲೇಜಿನಲ್ಲಿ ನಾಳೆ ಬೆ.10 ಗಂಟೆಗೆ ಒಂದು ದಿನದ ಜಾಗೃತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ್ ತಿಳಿಸಿದ್ದಾರೆ.

ಕಾರ್ಯಗಾರದಲ್ಲಿ ಉದ್ಯಮಿದಾರರಿಗೆ ವ್ಯಾಪಾರ ಅವಕಾಶಗಳ ಕುರಿತು ಮಾರ್ಗದರ್ಶನ,ವ್ಯವಹಾರ ಯೋಜನೆಗೆ ಸಿದ್ದತೆಗೆ ಸಹಕಾರ, ತಂತ್ರಜ್ಞಾನದ ಉನ್ನತೀಕರಣ ಮತ್ತು ಗುಣಮಟ್ಟದ ಪ್ರಮಾಣೀಕರಣಕ್ಕೆ ಬೆಂಬಲ, ಬ್ರಾಂಡಿಂಗ್ ಮತ್ತು ರಪ್ತು ಪ್ರಚಾರದ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಅಸಕ್ತಿವುಳ್ಳ ಉದ್ದಿಮೆದಾರರು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande