
ವಿಜಯಪುರ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2025-26ನೇ ಸಾಲಿನ ಸ್ನಾತಕೋತ್ತರ ಎಂಸಿಎ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂಸಿಎ ವಿಭಾಗದಲ್ಲಿ ಕೆಇಎಯಿಂದ ಭರ್ತಿಯಾಗದೇ ಬಾಕಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ
ಅರ್ಜಿಗಳನ್ನು ವಿಜಯಪುರದ ಗಣಕ ವಿಜ್ಞಾನ ವಿಭಾಗ ಸ್ನಾತಕೋತ್ತರ ಕೇಂದ್ರದಿಂದ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಪಡೆದುಕೊಳ್ಳಲು ಕೊನೆಯ ದಿನಾಂಕ: 10-12-2025 ಆಗಿದ್ದು,ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು,ಸ್ನಾತಕೋತ್ತರ ಕೇಂದ್ರ ವಿಜಯಪುರ ಇವರನ್ನು ಹಾಗೂ ಅಶೋಕ ಮೀಶಿ ಮೊ: 9900762888 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande