
ಗದಗ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ವತಿಯಿಂದ ಜಿಲ್ಲಾಮಟ್ಟದ ಸಭೆಯನ್ನು ಕರೆಯಲಾಗಿದೆ ಪ್ರತಿ ವರ್ಷದಂತೆ ಫೆಬ್ರವರಿ 08 ಮತ್ತು 09 ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಐತಿಹಾಸಿಕ 8 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ.9 ಮಂಗಳವಾರ ಬೆಳಿಗ್ಗೆ 10ಘಂಟೆಗೆ ಗದಗ ನಗರದ ವಾಲ್ಮೀಕಿ ಭವನದಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಯವರ ದಿವ್ಯ ಸಾನಿದ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ -2026 ರ ಪೂರ್ವಭಾವಿ ಸಭೆ ಜರುಗಲಿದೆ.
ಕಾರಣ ಗದಗ ತಾಲೂಕು ಸೇರಿದಂತೆ ಲಕ್ಷ್ಮೇಶ್ವರ. ಶಿರಹಟ್ಟಿ. ಮುಂಡರಗಿ. ರೋಣ. ನರಗುಂದ. ಗಜೇಂದ್ರಗಡ. ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಗುರು ಹಿರಿಯರು, ಸಮಾಜದ ಜನಪ್ರತಿನಿಧಿಗಳು, ನೌಕರ ಬಾಂಧವರು, ಯುವಕರು, ಮಹಿಳೆಯರು, ಗದಗ ಜಿಲ್ಲಾ ಸುತ್ತಮುತ್ತ ಎಲ್ಲ ಗ್ರಾಮದ ವಾಲ್ಮೀಕಿ ನಾಯಕ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಹಾಗೂ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಗದಗ ಜಿಲ್ಲಾಧ್ಯಕ್ಷರಾದ ಬಸವರಾಜ.ಎಮ್. ಬೆಳಧಡಿ ಅವರು ಮತ್ತು ಯುವ ಘಟಕದ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಸಿದ್ದಮ್ಮನಹಳ್ಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP