ದೆಹಲಿ ಸ್ಫೋಟ : ಅನಂತ್‌ನಾಗ್ ಅರಣ್ಯ ಪ್ರದೇಶದಲ್ಲಿ ಎನ್‌ಐಎ ಶೋಧ
ಶ್ರೀನಗರ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶ
ದೆಹಲಿ ಸ್ಫೋಟ : ಅನಂತ್‌ನಾಗ್ ಅರಣ್ಯ ಪ್ರದೇಶದಲ್ಲಿ ಎನ್‌ಐಎ ಶೋಧ


ಶ್ರೀನಗರ, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದೆ.

“ವೈಟ್ ಕಾಲರ್” ಭಯೋತ್ಪಾದಕ ಮಾಡ್ಯೂಲ್‌ಗೆ ಸಂಬಂಧಿಸಿದಂತೆ ಬಂಧಿತರಾದ ಇಬ್ಬರು ಆರೋಪಿಗಳು — ಡಾ. ಆದಿಲ್ ರಾಥರ್ ಮತ್ತು ಜಾಸಿರ್ ಬಿಲಾಲ್ ವಾನಿ — ಅವರನ್ನು ಎನ್‌ಐಎ ಅಧಿಕಾರಿಗಳು, ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಪಡೆಗಳ ಸಹಕಾರದೊಂದಿಗೆ ಮಟ್ಟನ್ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಶೋಧ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಮೂಲಗಳ ಪ್ರಕಾರ, ಬಂಧಿತರು ದಕ್ಷಿಣ ಕಾಶ್ಮೀರದ ಮಟ್ಟನ್ ಅರಣ್ಯ ಪ್ರದೇಶದಲ್ಲಿರುವ ಕೆಲವು ಅಡಗುತಾಣಗಳ ಸ್ಥಳ ಬಗ್ಗೆ ಎನ್‌ಐಎಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯನ್ನು ಆಧರಿಸಿ ತಂಡವು ಹಲವು ಗಂಟೆಗಳ ಕಾಲ ಶೋಧ ನಡೆಸಿದೆ.

ಸ್ಫೋಟಕ್ಕೆ ಬಳಸಲಾದ ಸ್ಫೋಟಕಗಳ ಮೂಲ, ಹೊಂದಾಣಿಕೆ, ಹಾಗೂ ಬಳಕೆ ಮಾಡಿದ ತಾಂತ್ರಿಕ ಸಹಾಯ ಜಾಲವನ್ನು ಪತ್ತೆಹಚ್ಚುವ ಉದ್ದೇಶದಿಂದ ಶೋಧ ನಡೆಸಲಾಗುತ್ತಿದೆ. ಶೋಧ ಕಾರ್ಯಾಚರಣೆಯ ಕುರಿತು ಹೆಚ್ಚಿನ ವಿವರಗಳು ತನಿಖೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande