ಹುಬ್ಬಳ್ಳಿ-ಧಾರವಾಡ ನಡುವೆ ಇಆರ್‌ಟಿ ಸೇವೆ : ಸಚಿವರ ಸಭೆ
ಬೆಳಗಾವಿ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್
Meeting


ಬೆಳಗಾವಿ, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು.

ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹಾಗೂ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಶಾಸಕರಾದ ಎನ್ ಹೆಚ್ ಕೋನರಡ್ಡಿ, ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಎಂ ಆರ್ ಪಾಟೀಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌ ವಿ ಪ್ರಸಾದ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande