ನಟಿ ರನ್ಯಾ ರಾವ್ ನ್ಯಾಯಾಂಗ ವಶಕ್ಕೆ
ಬೆಂಗಳೂರು, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್​​ ಗೆ 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆಗಾಗಿ ಡಿಆರ್​ಐ ಅಧಿಕಾರಿಗಳ ವಶದಲ್ಲಿದ್ದ ರನ್ಯಾರ ಮೂರು ದಿನಗಳ ಕಸ್ಟಡಿ ಅವದಿ ಅಂತ್ಯಗೊಂಡ ಹಿನ್ನೆ
Ranya


ಬೆಂಗಳೂರು, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್​​ ಗೆ 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಚಾರಣೆಗಾಗಿ ಡಿಆರ್​ಐ ಅಧಿಕಾರಿಗಳ ವಶದಲ್ಲಿದ್ದ ರನ್ಯಾರ ಮೂರು ದಿನಗಳ ಕಸ್ಟಡಿ ಅವದಿ ಅಂತ್ಯಗೊಂಡ ಹಿನ್ನೆಲೆ ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯದಲ್ಲಿ, ನನಗೆ ಮಾನಸಿಕ ಹಿಂಸೆ ಆಗುತ್ತಿದೆ ಎಂದು ನಟಿ ರನ್ಯಾ ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದಾರೆ. ಇತ್ತ ಡಿಆರ್​ಐ ಅಧಿಕಾರಿಗಳು ವಿಚಾರಣೆ ಬಾಕಿ ಇದ್ದು ಮತ್ತೆ ರನ್ಯಾ ಅವರನ್ನು ಕಸ್ಟಡಿಗೆ ನೀಡುವಂತೆ ​ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಧೀಶರು, ನಟಿ ರನ್ಯಾ ರಾವ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande