ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೂದಗುಂಪಾ ಗ್ರಾಮ ಪಂಚಾಯತಿಯ
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದರಿಂದ ಖಾಲಿ ಇರುವ ಈ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ರೂ. 9000 ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಬೂದಗುಂಪಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಮಾರ್ಚ್ 18ರ ಒಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31, 32 ಜಿಯೋ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ರವರಿಗೆ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು.

ಈ ಹುದ್ದೆಯು ಸಂಪೂರ್ಣವಾಗಿ ಗೌರಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕ ಹುದ್ದೆಯಾಗಿದ್ದು, ಅರ್ಜಿ ಸಲ್ಲಿಸಲಿಚ್ಛೀಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ಒಳಗಿನ ನಿರುದ್ಯೋಗಿ ಅಂಗವಿಕಲರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿಶೇಷ ಶಿಕ್ಷಣ, ಆರ್.ಸಿ.ಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ಹೆ ಭಾಷೆ ತರಬೇತಿ, ಧೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಷಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.

ಅಂಗವಿಕಲರ ಯು.ಡಿ.ಐ.ಡಿ ವಿಶೇಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಅಂಗವಿಕಲರಾಗಿರಬೇಕು. ಅಂಗವಿಕಲತೆಯು ಕನಿಷ್ಠ ಶೇ 40 ರಷ್ಟಿರಬೇಕು. (ಭಾಗಶ: ಅಂಧರಿಗೆ, ಭಾಗಶ:ಶ್ರವಣ ದೋಷವುಳ್ಳವರಿಗೆ ಮತ್ತು ದೈಹಿಕ ಅಂಗವಿಕಲರಿಗೆ). ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು (ಗ್ರಾಮ ಪಂಚಾಯತಿ ದೃಢೀಕರಣ). ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು. ಮಹಿಳಾ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು

ನಿಗದಿಪಡಿಸಿದ ದಿನಾಂಕ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ: 08539-295496 ಗೆ ಸಂಪರ್ಕಿಸಬಹುದು ಅಥವಾ ಕಛೇರಿಗೆ ಭೇಟಿ ನೀಡಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande