ಹಿಸ್ಸಾರ್, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉದ್ಯೋಗ ಪಡೆಯುವ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಉದ್ಯೋಗಾಕಾಂಕ್ಷಿಗಳಾಗುವ ಬದಲು ಉದ್ಯೋಗ ಸೃಷ್ಟಿಕರ್ತರಾಗಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ಇದರಿಂದ ಸಾಮಾಜಿಕ ಕಲ್ಯಾಣ ಮತ್ತು ದೇಶದ ಪ್ರಗತಿಗೆ ಒಂದು ದೊಡ್ಡ ಹೆಜ್ಜೆಯಾಗುತ್ತದೆ ಎಂದರು.
ಸೋಮವಾರ ಹರಿಯಾಣಾದ ಗುರು ಜಂಭೇಶ್ವರ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಆರನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯದ ಆಧಾರದ ಮೇಲೆ ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಬದಲಾಗುತ್ತಿರುವ ಜಾಗತಿಕ ಬೇಡಿಕೆಗೆ ಅನುಗುಣವಾಗಿ ಯುವ ಪೀಳಿಗೆಯನ್ನು ಸಿದ್ಧಪಡಿಸುವುದು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ದೊಡ್ಡ ಸವಾಲಾಗಿದೆ ಎಂದ ಅವರು, ದೇಶದ ಸಮತೋಲಿತ ಮತ್ತು ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ಮತ್ತು ತಂತ್ರಜ್ಞಾನದ ಪ್ರಯೋಜನಗಳು ಪ್ರತಿಯೊಂದು ಹಳ್ಳಿಗೂ ತಲುಪುವುದು ಸಹ ಮುಖ್ಯವಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa