ಗದಗ, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆ ಶಿರಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025ರ ಚುನಾವಣೆಯಲ್ಲಿ ಸಾಲಗಾರರ ಪರಿಶಿಷ್ಟ ಜಾತಿ ಮತಕ್ಷೇತ್ರದಿಂದ ದಯಾನಂದ ದೇವಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.
ಚುನಾವಣೆ ಮುಗಿದ ಮೇಲೆ ಮಾತನಾಡಿದ, ತಾ.ಪಂ ಮಾಜಿ ಸದಸ್ಯ ದೇವಪ್ಪ ಲಮಾಣಿ, ಪರಿಶಿಷ್ಟ ಜಾತಿ ಮತಕ್ಷೇತ್ರದಿಂದ ನಮ್ಮ ಭಾಗದಿಂದ ದಯಾನಂದ ಲಮಾಣಿ ಆಯ್ಕೆಯಾಗಿದ್ದು, ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಉಪಯುಕ್ತವಾದಂತಹ ಮಾಹಿತಿಗಳನ್ನು ನೀಡುವುದರ ಜೊತೆಗೆ ಸರಕಾರದ ಸೌಲಭ್ಯವನ್ನು ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / Lalita MP