ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಧಾನ ಸೌಧದ ಸಭಾಂಗಣದ ಆವರಣದಲ್ಲಿ ಅಳವಡಿಸಲಾಗಿರುವ ವಿಧಾನ ಸಭೆ ನಡೆದು ಬಂದ ದಾರಿ ಕುರಿತಾದ ಚಿತ್ರಗಳ ಪ್ರದರ್ಶನ ಸ್ಥಳವನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಶಿವಕುಮಾರ್, ವಿಧಾನ ಸಭೆಯ ಇತಿಹಾಸದ ಪುಟಗಳನ್ನು ತೆರೆದಿಡುವ ಈ ಚಿತ್ರಗಳು, ನಮ್ಮ ನಾಡಿನ ರಾಜಕೀಯ ಇತಿಹಾಸಕ್ಕೆ ಹಿಡಿದ ಕೈಗನ್ನಡಿಯಂತಿವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa