ಬಳ್ಳಾರಿ, 06 ಮಾರ್ಚ್ (ಹಿ.ಸ.):
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಯೋಗಿ ನಾರೇಯಣ ಯತೀಂದ್ರ ಶ್ರೀ ಕೈವಾರ ತಾತಯ್ಯ ಜಯಂತಿಯನ್ನು ಮಾರ್ಚ್ 14 ರ ಶುಕ್ರವಾರ ಮಧ್ಯಾಹ್ನ 12.00 ಗಂಟೆಗೆ ನಗರದ ವಡ್ಡರಬಂಡ ಬಲಿಜ ಭವನದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಲಿಜ ಸಂಘದ ಜಿಲ್ಲಾಧ್ಯಕ್ಷ ಎಸ್.ಮುರಳಿಕೃಷ್ಣ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಾಕರಾದ ಅಲಂ ಭಾಷಾ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಲಕ್ಷ್ಮೀ ಪವನ್ ಕುಮಾರ್ ತಂಡದಿಂದ ಭಕ್ತಿ ಸಂಗೀತ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಬಲಿಜ ಭವನದಿಂದ ಆರಂಭವಾಗಿ ರಾಘವೇಂದ್ರ ಚಿತ್ರಮಂದಿರ-ಇಂದಿರಾ ವೃತ್ತ-ಗಡಿಗಿ ಚೆನ್ನಪ್ಪ ವೃತ್ತ-ಮೀನಾಕ್ಷಿ ವೃತ್ತದ ಮೂಲಕ ಬಲಿಜ ಭವನÀದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್