ಲೋಕಾಯುಕ್ತ ಪೊಲೀಸ್ : ಸಾರ್ವಜನಿಕ ಜನ ಸಂಪರ್ಕ ಸಭೆ
ಬಳ್ಳಾರಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ಹಲವು ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭ
ಲೋಕಾಯುಕ್ತ ಪೊಲೀಸ್ : ಸಾರ್ವಜನಿಕ ಜನ ಸಂಪರ್ಕ ಸಭೆ


ಬಳ್ಳಾರಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ಹಲವು ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್‍ಪಿ ಆರ್.ವಸಂತ್‍ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಸಂಗಮೇಶ್ ಇವರು ಸಂಡೂರು ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.

ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:

ಮಾ.18 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ.

ಮಾ.20 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ದೂರುಗಳಿದ್ದಲ್ಲಿ ನಿಗದಿಪಡಿಸಿದ ದಿನದಂದು ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande