ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 16 ನೇ ಬಜೆಟ್ ದೂರದೃಷ್ಟಿಯುಳ್ಳ ಬಜೆಟ್ಆಗಿದೆ, ಈ ಬಜೆಟ್ ಆಶಾದಾಯಕ ಮಾತ್ರವಲ್ಲ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡನೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿಗಳು ಸರ್ವಸ್ಪರ್ಶಿ ಬಜೆಟ್ ಮಂಡಿಸಿದ್ದಾರೆ. ಇದು ಅವರ ಅನುಭವ ಮತ್ತು ಸರ್ವರ ಏಳಿಗೆಗೆ ಅವರು ಹೊಂದಿರುವ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆಗೂ ಹೆಚ್ಚುವರಿ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲ ಇಲಾಖೆಗಳಿಗೂ ಸಿದ್ದರಾಮಯ್ಯ ಅವರು ಅನುದಾನ ಹಂಚಿಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆಗಳು ನೀಡಲಾಗಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ ಎನ್ನುವುದಕ್ಕೆ ಸಿದ್ದರಾಮಯ್ಯ ಮಂಡಿಸಿದ 2025-2026ನೇ ಬಜೆಟ್ ಸಾಕ್ಷಿಯಾಗಿದೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa