ರಾಯಚೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಸದರ್ ಬಜಾರ್ ಪೊಲೀಸ ಠಾಣೆಯ ವ್ಯಾಪ್ತಿಯ ನಿವಾಸಿಯಾದ ಪಾರ್ವತಿ ಗಂಡ ಚಂದ್ರಶೇಖರ (40) ಮೇ.09ರ ಬೆಳಿಗ್ಗೆ 9ಗಂಟೆ ಸುಮಾರಿಗೆ ಯರಗುಂಟಾ ಗ್ರಾಮಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ್ ಬಜಾರ್ ಪೊಲೀಸ ಠಾಣೆಯ ಗುನ್ನ ನಂ;51/2024ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮಹಿಳೆಯ ಬಗೆ ಸುಳಿವು ಸಿಕ್ಕಲ್ಲಿ ರಾಯಚೂರಿನ ಸದರ್ ಬಜಾರ್ ಪೊಲೀಸ ಠಾಣೆಯ ದೂರವಾಣಿ ಸಂಖ್ಯೆ: 08532-226148, ಪಿಎಸ್ಐ; 9480803830ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್