ಬೆಂಗಳೂರು, 09 ಮಾರ್ಚ್ (ಹಿ.ಸ.) :
ಆ್ಯಂಕರ್ : ಜಾರಿ ನಿರ್ದೇಶನಾಲಯ ಬಂಧನದಿಂದ ತಪ್ಪಿಸಿಕೊಳ್ಳಲು ಮುಡಾದಿಂದ ಅಕ್ರಮವಾಗಿ ಪಡೆದ 14 ನಿವೇಶನಗಳನ್ನು ವಾಪಸು ಕೊಟ್ಟಿದ್ದ ಸಿದ್ದರಾಮಯ್ಯ ಕುಟುಂಬ, ಈಗ ಸೈಟುಗಳನ್ನು ವಾಪಸು ಪಡೆಯುವ ಮಾತಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳೇ, ನಿಮಗೆ ನನ್ನದೊಂದು ಸವಾಲು. ನಿಮ್ಮ ಪುತ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೂಡಾದಿಂದ 14 ನಿವೇಶನಗಳನ್ನು ವಾಪಸ್ಸು ಪಡೆಯುತ್ತೇವೆ, ಅದು ನಮಗೇ ಸೇರಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ನೀವು 16 ಬಜೆಟ್ ಅಲ್ಲ, 19 ಬಜೆಟ್ ಮಂಡಿಸುತ್ತೀರಿ ಎಂದೂ ಕೂಡ ಹೇಳಿದ್ದಾರೆ. ಸಿದ್ದರಾಮಯ್ಯನವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ, ಪ್ರಾಮಾಣಿಕರಾಗಿದ್ದರೆ, ಮುಂದಿನ ಬಜೆಟ್ ಮಂಡಿಸುವ ಮುನ್ನ ಮುಡಾಗೆ ಹಿಂದಿರುಗಿಸಿರುವ ಸೈಟುಗಳನ್ನು ವಾಪಸ್ಸು ಪಡೆಯಲಿ. ಇದು ನನ್ನ ಸವಾಲು. ಇದಕ್ಕೆ ಸಿದ್ದರಾಮಯ್ಯನವರು ಒಪ್ಪುತ್ತರಾ? ಎಂದು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa