ಕೋಲಾರ ಮೇ ೨೨ (ಹಿ.ಸ) :
ಆ್ಯಂಕರ್ : ಉತ್ತಮ ಮುಂಗಾರು ಮಳೆ ನಿರೀಕ್ಷೆಯಲ್ಲಿರುವ ರೈತರ ಕೃಷಿ ಚಟುವಟಿಕೆಗೆ ಅವಶ್ಯಕತೆಯಿರುವ ಬಿತ್ತನೆ ಬೀಜ ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆ ಕೃಷಿ ಇಲಾಖೆ ಎಚ್ಚರವಹಿಸಬೇಕೆಂದು ರೈತಸಂಘದಿ0ದ ಸಹಾಯಕ ಕೃಷಿ ನಿರ್ದೇಶಕರಾದ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಸಾವಿರಾರು ಎಕರೆ ಟೊಮೇಟೊ, ಕ್ಯಾಪ್ಸಿಕಂ ಮತ್ತಿತರ ವಾಣಿಜ್ಯ ಬೆಳೆಗಳನ್ನು ಮುಂಗಾರು ಮಳೆಯಿಂದ ಬೆಳೆಗಳಿಗೆ ಬಾಧಿಸುತ್ತಿರುವ ಅಂಗಮಾರಿ ಮತ್ತಿತರ ರೋಗಗಳಿಂದ ರಕ್ಷಣೆ ಮಾಡಿಕೊಳ್ಳಲು ಭಾನುವಾರ ರಜೆ ಇರುವುದರಿಂದ ಔಷಧಿ ಸಿಗದೆ ಪರದಾಡುವ ಪರಿಸ್ಥಿತಿ ಇರುವುದರಿಂದ ಮಾನವೀಯತೆ ದೃಷ್ಟಿಯಿಂದ ಔಷಧಿ ಅಂಗಡಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರಾದ ವೇಮನ ಅವರು ಎಲ್ಲಾ ತಾಲೂಕು ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಮಳೆಗಾಲ ಮುಗಿಯುವವರೆಗೂ ಭಾನುವಾರದ ರಜೆಯನ್ನು ರದ್ದು ಮಾಡಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕೆ0ದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮಾಡಿದರು.
ಯಾವುದೇ ಶಾಶ್ವತ ನೀರಾವರಿ ಯೋಜನೆಗಳು ಹಾಗೂ ಕೈಗಾರಿಕೆಗಳಿಲ್ಲದ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಧಾರಿತ ಕೃಷಿ ಚಟುವಟಿಕೆಯನ್ನು ನಂಬಿರುವ ಜಿಲ್ಲೆಯ ರೈತರಿಗೆ ಉತ್ತಮ ಮುಂಗಾರು ಮಳೆಯಿಂದ ಖಷಿ ತಂದಿದೆ. ಅದರಂತೆ ಕೃಷಿ ಇಲಾಖೆಯು ರೈತರಿಗೆ ತೊಂದರೆಯಾಗದAತೆ ರಸಗೊಬ್ಬರ ಬಿತ್ತನೆ ಬೀಜ ಸಮಯಕ್ಕೆ ಸರಿಯಾಗಿ ವಿತರಣೆ ಮಾಡಬೇಕೆಂದು ರೈತಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಕೃಷಿ ಅಧಿಕಾರಿಗಳನ್ನು ಒತ್ತಾಯಿಸಿದರು.
ಪ್ರತಿ ವರ್ಷ ಬಿತ್ತನೆಬೀಜ ಮತ್ತು ರಸಗೊಬ್ಬರಕ್ಕಾಗಿ ರೈತರ ಮೇಲೆ ಗೋಲಿಬಾರ್ ಲಾಠಿಚಾರ್ಜ್ ನಡೆಸುತ್ತಿರುವ ಸರ್ಕಾರಗಳು ಈ ಬಾರಿ ಕೃಷಿ ಸಚಿವರು ರಾಜ್ಯಾದ್ಯಂತ ರೈತರಿಗೆ ಯಾವುದೇ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಿಲ್ಲ. ಆಯಾ ಜಿಲ್ಲೆಯ ರೈತರ ಕೃಷಿ ಚಟುವಟಿಕೆಗಳಿಗೆ ಅವಶ್ಯಕತೆಗೆ ತಕ್ಕಂತೆ ಕೃಷಿ ಇಲಾಖೆಯಿಂದ ದಾಸ್ತಾನು ಮಾಡಿದೆ ಎಂದು ಹೇಳಿಕೆ ನೀಡುತ್ತಾರೆ. ಬಿತ್ತನೆ ಸಮಯದಲ್ಲಿ ಸಮರ್ಪಕವಾದ ಬಿತ್ತನೆಬೀಜ, ರಸಗೊಬ್ಬರ ಸಿಗದೆ ಸಾವಿರಾರು ರೂಪಾಯಿ ಖರ್ಚು ಮಾಡಿ ಖಾಸಗಿ ಅಂಗಡಿಗಳಿ0ದ ಖರೀದಿ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ವರದಾನವಾಗಿದ್ದ ಕೃಷಿ ಯಂತ್ರಧಾರೆ ಯೋಜನೆಯನ್ನು ಸ್ಥಗಿತಗೊಳಿಸಿರುವುದರಿಂದ ಖಾಸಗಿ ಕಂಪನಿಗಳ ಯಂತ್ರಧಾರೆಗಳ ದರವನ್ನು ಹೆಚ್ಚಳ ಮಾಡಿ ರೈತರ ಜೊತೆ ಚೆಲ್ಲಾಟವಾಡುತ್ತಿದ್ದಾರೆ.
ಒಂದು ಕಡೆ ಎತ್ತುಗಳು ಇಲ್ಲದೆ ಹೊಲಗದ್ದೆಗಳನ್ನು ಉಳುಮೆ ಮಾಡಲು ಪ್ರತಿ ಎಕರೆಗೆ ೫ ರಿಂದ ೬ ಸಾವಿರರೂಪಾಯಿ ಹಣ ನೀಡಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ. ಸಬ್ಸಿಡಿ ದರದಲ್ಲಿ ಯಂತ್ರಧಾರೆಗಳನ್ನು ನೀಡುವ ಬದಲು ಖಾಸಗಿ ಕಂಪನಿಗಳ ಜೊತೆ ಒಳಒಪ್ಪಂದ ಮಾಡಿಕೊಂಡು ರೈತರನ್ನು ಸುಲಿಗೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯಕತೆಯಿರುವ ರಾಗಿ, ಜೋಳ, ತೊಗರಿ, ನೆಲಗಡಲೆ ಹಾಗೂ ರಸಗೊಬ್ಬರಗಳನ್ನು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ನೇರವಾಗಿ ರೈತರಿಗೆ ತಲುಪಿಸುವ ಕಾರ್ಯಕ್ರಮ ಮಾಡುವ ಮುಖಾಂತರ ಕೃತಕ ಅಭಾವ ಸೃಷ್ಟಿ ಮಾಡಿ ದುಬಾರಿ ಬೆಲೆಗೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವ ಖಾಸಗಿ ಅಂಗಡಿಗಳ ವಿರುದ್ಧ ನಿಗಾವಹಿಸಲು ವಿಶೇಷ ತಂಡ ರಚನೆ ಮಾಡಿ ಅಂತಹ ಅಂಗಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಪರವಾನಗಿಯನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕರಾದ ರವಿಕುಮಾರ್ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಂಟಿ ಕೃಷಿ ನಿರ್ದೇಶಕರ ಆದೇಶದಂತೆ ರೈತರಿಗೆ ಅವಶ್ಯಕತೆಯಿರುವ ಬಿತ್ತನೆ ಬೀಜ ರಸಗೊಬ್ಬರ ದಾಸ್ತಾನು ಇದೆ. ಯಾವುದೇ ತೊಂದರೆಯಾಗದ0ತೆ ಕ್ರಮವಹಿಸುವ ಜೊತೆಗೆ ಪ್ರತಿ ಭಾನುವಾರ ಔಷಧಿ ಅಂಗಡಿಗಳ ರಜೆಯ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈತರಿಗೆ ಅನುಕೂಲ ಮಾಡಿಕೊಡುವ ಭರವಸೆಯನ್ನು ನೀಡಿದರು.
ಮನವಿ ನೀಡುವಾಗ ರಾಜ್ಯ ಪ್ರ.ಕಾ. ಫಾರೂಖ್ ಪಾಷ, ಕಾರ್ಯಾಧ್ಯಕ್ಷ ಬಂಗಾರಿ ಮಂಜು, ತಾಲೂಕು ಪ್ರ.ಕಾ.ರಾಜೇಶ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಂಗಸAದ್ರ ತಿಮ್ಮಣ್ಣ, ಸುನಿಲ್ಕುಮಾರ್, ಭಾಸ್ಕರ್, ಜುಬೇರ್ಪಾಷ, ಅಂಬ್ಲಿಕಲ್ ಮಂಜುನಾಥ, ಧರ್ಮ, ನಾಗೇಶ್, ಗಿರೀಶ್, ಪುತ್ತೇರಿ ರಾಜು, ವೇಣು, ಕೇಶವ, ರಾಮಕೃಷ್ಣಪ್ಪ ಮುಂತಾದವರು ಇದ್ದರು.
ಚಿತ್ರ : ಕೋಲಾರ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಪದಾಧಿಕಾರಿಗಳು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್