ಉಪ ಚುನಾವಣೆ ಹಿನ್ನೆಲೆ, ಪ್ರತಿಬಂಧಕಾಜ್ಞೆ ಜಾರಿ
ಗದಗ, 22 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮ ಪಂಚಾಯ್ತಿಯ ವಿವಿಧ ಕಾರಣಗಳಿಂದ ಖಾಲಿಇರುವ , ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ-2025 ರ ಹಿನ್ನೆಲೆಯಲ್ಲಿ ಮೇ 25 ರಂದು ಮತದಾನವು ಜರುಗಲಿದೆ. ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಸಂ
ಪೋಟೋ


ಗದಗ, 22 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮ ಪಂಚಾಯ್ತಿಯ ವಿವಿಧ ಕಾರಣಗಳಿಂದ ಖಾಲಿಇರುವ , ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ-2025 ರ ಹಿನ್ನೆಲೆಯಲ್ಲಿ ಮೇ 25 ರಂದು ಮತದಾನವು ಜರುಗಲಿದೆ.

ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಾಗೂ ಮತದಾನವು ಸುಗಮ ಹಾಗೂ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ಮೇ 23 ರ ಸಂಜೆ 5 ಗಂಟೆಯಿಂದ ಮೇ 25 ರ ಮಧ್ಯರಾತ್ರಿಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ -2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ , 1963 ರ ಕಲಂ 35 ರಡಿ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande