ಕೋಲಾರ, ಮೇ ೨೨(ಹಿ.ಸ) :
ಆ್ಯಂಕರ್ : ಸುಗಮ್ಯ ಭಾರತ ಅಭಿಯಾನ ಯೋಜನೆಯ ಸುಗಮ್ಯ ಯಾತ್ರೆಗೆ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಗುರುವಾರ ಜಿಲ್ಲಾಡಳಿತ ಭವನದ ಮುಂಭಾಗದಿAದ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೋಲಾರ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಲಿಟಿ (ಎ.ಪಿ.ಡಿ) ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಸುಗಮ್ಯ ಭಾರತ ಅಭಿಯಾನ ಯೋಜನೆಯಡಿ ಸುಗಮ್ಯ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಮಾತನಾಡಿ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಸುಗಮವಾಗಿ ವಿಕಲಚೇತನರು ಸಂಚರಿಸಲು ಹಾಗೂ ಎಲ್ಲಾ ಹೊರಾಂಗಣ ಮತ್ತು ಒಳಾಂಗಣ ಸೌಲಭ್ಯಗಳಿಗೆ ಅಡೆತಡೆ ರಹಿತ ವಾತಾವರಣ ಸೌಲಭ್ಯವನ್ನು ಸೃಷ್ಟಿಸುವುದು ಸುಗಮ್ಯ ಭಾರತದ ಯೋಜನೆಯ ಮೂಲ ಉದ್ದೇಶವಾಗಿದೆ. ಸುಗಮ್ಯ ಭಾರತ ಯೊಜನೆಯಡಿ ಸುಗಮ್ಯ ಯಾತ್ರಾ ಎಂಬ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಇಂದು ಚಾಲನೆ ದೊರಕಿದೆ. ದೇಶದ ಹಲವಾರು ರಾಜ್ಯಗಳು ಈಗಾಗಲೇ ಸುಗಮ್ಯ ಯಾತ್ರೆ ಜಾಥಾ ಕಾರ್ಯಕ್ರಮ ರಾಜ್ಯದ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿರುವ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಟ್ಯಾಕಟೈಲ್ಸ್ ಮತ್ತು ಸೈನೇಜ್ ಫಲಕಗಳು ಒಳಗೊಂಡAತೆ ವಿಕಲಚೇತನ ವ್ಯಕ್ತಿಗಳ ಸ್ನೇಹಮಯಿಯಾಗಿರುವ ಬಗ್ಗೆ ಮಾಹಿತಿಯನ್ನು ಕ್ರೋಡಿಕರಿಸಲು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ದಿ ಅಸೋಸಿಯೇಷನ್ ಆಫ್ ಫೀಪಲ್ ವಿಥ್ ಡಿಸೇಬಲಿಟಿ, ಬೆಂಗಳೂರು ಈ ಸಂಸ್ಥೆಯೊAದಿಗೆ ಒಪ್ಪಂದ ಮಾಡಿಕೊಂಡಿದ್ದು ಅದರಂತೆ ಅಡೆತಡೆ ರಹಿತ ವಾತಾವರಣದ ಬಗ್ಗೆ ಸಂಪೂರ್ಣ ಮತ್ತು ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು ಎಸ್ ಟು ಆಕ್ಸಿಸ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ ಸಾಮಾನ್ಯ ವ್ಯಕ್ತಿಯು ಸಹ ತನ್ನ ಮೊಬೈಲ್ನಿಂದ ಈ ಆಪ್ ಅನ್ನು ಸುಲಭವಾಗಿ ಬಳಸಲು ಸಾಧ್ಯವಿದೆ ಆದ್ದರಿಂದ ಎಲ್ಲರೂ ಕೈಜೋಡಿಸಿ ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ತರೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಮ್ಯ ಎಂ, ಎ.ಪಿ.ಡಿ ಸಂಸ್ಥೆಯ ಗಿರಿಜಮ್ಮ, ವಿವಿದ್ಧೋದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಚಿತ್ರ : ವಿಕಲಚೇತನರ ಸುಗಮ ಅರಿವು ಯಾತ್ರೆಗೆ ಕೋಲಾರದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್