ಕೇಂದ್ರ ಸರಕಾರದಿಂದ ದಲಿತ ನಾಯಕರ ಗುರಿ : ಎಂ.ಲಕ್ಷ್ಮಣ್
ಮೈಸೂರು, 22 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ದಲಿತ ನಾಯಕರನ್ನು ಗುರಿ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರ ಮೇಲೆ ಇ.ಡಿಯಿಂದ ದಾಳಿ ಮಾಡಿಸಿ ಹೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಮೈಸೂರಿನ ಕಾಂಗ್ರೆಸ್ ಭವನದಲ್ಲಿಂದು ಸ
M.lakshman


ಮೈಸೂರು, 22 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ದಲಿತ ನಾಯಕರನ್ನು ಗುರಿ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರ ಮೇಲೆ ಇ.ಡಿಯಿಂದ ದಾಳಿ ಮಾಡಿಸಿ ಹೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದರೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮೇಲೆ ತನಿಖೆ ನಡೆಸಬೇಕು. ಆದರೆ ಇ.ಡಿಗೆ ಈ ರೀತಿಯ ದಾಳಿ ಮಾಡಲು ಅಧಿಕಾರ ಇಲ್ಲ ಎಂದು ಹರಿಹಾಯ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande