ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಬೃಹತ್ ಬೆಂಗಳೂರು ಮಹಾನಗರ ಜಲಮಂಡಳಿ ಕಾರ್ಮಿಕರು ಬ್ಯಾನ್ಸಿ ಪ್ರದೇಶದಲ್ಲಿ ನೀರಿನ ಪೈಪ್ ಅಳವಡಿಸುವ ಕಾರ್ಯದ ವೇಳೆ ಜಿಎಐಎಲ್ ಸಂಸ್ಥೆಯ ಸಿಟಿ ಗ್ಯಾಸ್ ಪೈಪ್ ಲೈನ್ಗೆ ಹಾನಿಯಾಗಿರುವ ಘಟನೆ ನಡೆದಿದೆ.
ಪೈಪ್ ಲೈನ್ ನಿಂದ ಅನಿಲ ಸೋರಿಕೆ ಆಗಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಗ್ಯಾಸ್ ವಾಸನೆ ತೀವ್ರವಾಗಿ ಹರಡಿದೆ. ಇದರಿಂದ ಸ್ಥಳೀಯ ನಿವಾಸಿಗಳು ಭಯಭೀತರಾಗಿ ಮನೆಬಿಟ್ಟು ಹೊರಬಂದಿದ್ದಾರೆ. ಕೆಲ ಸ್ಥಳೀಯರು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.
ಘಟನೆ ಮಾಹಿತಿ ಸಿಗುತ್ತಿದ್ದಂತೆಯೇ ಗೇಲ್ ಸಂಸ್ಥೆ ತಾಂತ್ರಿಕ ತಂಡ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿ ಮಾಡುವಲ್ಲಿ ತೊಡಗಿದರು. ಅನಿಲ ಹರಿವು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು ಮತ್ತು ಪೈಪ್ ಲೈನ್ ದುರಸ್ತಿಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂಬ ಸ್ಪಷ್ಟನೆ ನೀಡಿದ ಅಧಿಕಾರಿಗಳು, ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa