ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ಇಂತಹ ದಾಳಿಗಳನ್ನು ಖಂಡಿಸಿ ದೇಶಾದ್ಯಂತ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸೋನಿಯಾ ಗಾಂಧಿ ಪ್ರಕರಣದಿಂದ ಹಿಡಿದು ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ ಎಂದ ಶಿವಕುಮಾರ್ ಚಾರಿಟೇಬಲ್ ಟ್ರಸ್ಟ್ಗಳು ಶಾಲಾ-ಕಾಲೇಜು ಫೀಸ್, ಮದುವೆ, ಆಸ್ಪತ್ರೆ ಬಿಲ್ಗೆ ಸಹಾಯ ಮಾಡುತ್ತವೆ. ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಆದರೆ ತಪ್ಪಿತಸ್ಥರೆಂದು ನಿಶ್ಚಯಿಸಲು ನ್ಯಾಯಾಲಯವೇ ಅಂತಿಮ, ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa