ಮೈಸೂರು, 22 ಮೇ (ಹಿ.ಸ.) :
ಆ್ಯಂಕರ್ : ಕಲಬುರಗಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿದ್ದರು. ಗಾದೆ ಮಾತು ಹೇಳಿದ್ರೆ ಗೂಂಡಾಗಿರಿ ಪ್ರದರ್ಶನ ಮಾಡಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಹಾಗೂ ಗೂಂಡಾಗಿರಿ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಈ ಹಿಂದೆ ತುರ್ತು ಪರಿಸ್ಥಿತಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ಗೂಂಡಾಗಿರಿಗೆ ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡಲಿದ್ದಾರೆ. ಪೊಲೀಸರು ಆಡಳಿತ ಪಕ್ಷದ ಕೈಗೊಂಬೆ ಆಗಬಾರದು. ವಿಪಕ್ಷ ನಾಯಕನಿಗೆ ರಕ್ಷಣೆ ಕೊಡದೆ ಇನ್ಯಾರಿಗೆ ರಕ್ಷಣೆ ನೀಡುತ್ತಿರಿ ಎಂದು ಪ್ರಶ್ನಿಸಿದ ಅವರು ರಿಪಬ್ಲಿಕ್ ಕಲಬುರ್ಗಿ ಬಹಳ ದಿನ ನಡೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa