ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲು ನವಲಗುಂದದಲ್ಲಿ ತಿರಂಗಾ ಯಾತ್ರೆ
ನವಲಗುಂದ, 22 ಮೇ (ಹಿ.ಸ.) : ಆ್ಯಂಕರ್ : ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬಳಿಕ ನಡೆದ ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ, ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಯಿತು. ಯಾತ್ರೆಯಲ್ಲಿ ಭಾಗವಹಿಸಿದ ಮಾಜ
Tiranga yatre


ನವಲಗುಂದ, 22 ಮೇ (ಹಿ.ಸ.) :

ಆ್ಯಂಕರ್ : ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬಳಿಕ ನಡೆದ ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ, ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಯಿತು.

ಯಾತ್ರೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸೈನಿಕರು ದೇಶದ ರಕ್ಷಣೆಗೆ ನಿಂತಿದ್ದಾರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ, ಎಂದು ಹೇಳಿದರು. ಪಾಕಿಸ್ತಾನ ಈಗಲೂ ಬುದ್ಧಿವಂತಿಕೆ ಪ್ರದರ್ಶಿಸದಿದ್ದರೆ, ಭಾರತ ತನ್ನ ಶಕ್ತಿ ತೋರಿಸದೆ ಇರುವುದಿಲ್ಲ ಎಂದು ಹೇಳಿದರು.

ಮೆರವಣಿಗೆಯಲ್ಲಿ ಸೈನಿಕರು, ಮಾಜಿ ಸೈನಿಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೃಹತ್ ತಿರಂಗಧ್ವಜವನ್ನು ಹಿಡಿದು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande