ವಿಜಯಪುರ, 23 ಮೇ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ₹50 ಕೋಟಿ ವಿಶೇಷ ಅನುದಾನ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.
ಪಟ್ಟಣದಲ್ಲಿ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಬಸವಣ್ಣಾದಿ ಶರಣರು ಹುಟ್ಟಿದ ಈ ಪುಣ್ಯಭೂಮಿಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕುದು ನನ್ನ ಭಾಗ್ಯ. ನಮ್ಮ ಸರ್ಕಾರ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವದಂತೆ ಬಸವಣ್ಣನವರ ಆಶಯಗಳನ್ನು ಪಾಲಿಸುತ್ತಿದೆ,” ಎಂದು ಹೇಳಿದರು.
ಸ್ಥಳೀಯ ಶಾಸಕ ಶಿವಾನಂದ ಪಾಟೀಲ ಹಾಗೂ ಎಸ್ಆರ್ ಪಾಟೀಲರು ಈ ಪ್ರದೇಶದ ಅಭಿವೃದ್ಧಿಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. “ಕೇವಲ ಮಾತು ಅಲ್ಲ, ಈ ಭಾಗದ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ಉನ್ನತಿಗೆ ಕೆಲಸ ಮಾಡುತ್ತಿದೆ,” ಎಂದರು.
“ರಾಜ್ಯದಲ್ಲಿ ಸುಭದ್ರ ಆಡಳಿತವಿದೆ. ಬಡತನದ ವಿರುದ್ಧ ಹೋರಾಟ ನಮ್ಮ ಆದ್ಯತೆ. ರೈತರು, ಕಾರ್ಮಿಕರು, ಯುವಕರು ಹಾಗೂ ಎಲ್ಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ,” ಎಂದು ಉಪಮುಖ್ಯಮಂತ್ರಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa