ಜನಾಕ್ರೋಶ ಮೂಲಕ ಬಿಜೆಪಿ ಸುಳ್ಳು ಪ್ರಚಾರ : ಸಿದ್ದರಾಮಯ್ಯ
ಮೈಸೂರು, 23 ಮೇ (ಹಿ.ಸ.) : ಆ್ಯಂಕರ್ : ಜನಾಕ್ರೋಶ ಕಾರ್ಯಕ್ರಮ ಮೂಲಕ ಬಿಜೆಪಿ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಪ್ರಚಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಧರ್
Cm


ಮೈಸೂರು, 23 ಮೇ (ಹಿ.ಸ.) :

ಆ್ಯಂಕರ್ : ಜನಾಕ್ರೋಶ ಕಾರ್ಯಕ್ರಮ ಮೂಲಕ ಬಿಜೆಪಿ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಪ್ರಚಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮ ಯಶಸ್ವಿಯಾಗಿ ನಡೆದು, ಸುಮಾರು 3 ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ, ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂಬ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಯಾವ ಕೆಲಸವನ್ನೂ ಮಾಡದೇ, ಕಾಂಗ್ರೆಸ್ ಸರ್ಕಾರದ ಯಶಸ್ಸಿಗೆ ಮರುಗುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶಕ್ತಿ ಯೋಜನೆ , ನಂತರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಯಿತು. ತದನಂತರ ಜನವರಿ 2024 ರಲ್ಲಿ ಯುವನಿಧಿಯನ್ನು ಜಾರಿಗೊಳಿಸಲಾಗಿದ್ದು, ಇದಕ್ಕಾಗಿ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande