ಹೊಸಪೇಟೆ, 23 ಮೇ (ಹಿ.ಸ.) :
ಆ್ಯಂಕರ್ : 2024-25ನೇ ಸಾಲಿನ ಎಸ್ಎಸ್ಎಲ್ಸಿ-2 ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಮೇ.26 ರಿಂದ ಜೂ.02 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ-2 ಪರೀಕ್ಷೆಗಳು ಸುಗಮವಾಗಿ ನಡೆಯುವ ನಿಟ್ಟಿನಲ್ಲಿ 23 ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ, ನಿರ್ಬಂಧಿತ ಪ್ರದೇಶದ ವ್ಯಾಪ್ತಿಯಲ್ಲಿ ಜೆರಾಕ್ಸ್, ಸೈಬರ್ ಸೆಂಟರ್ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಯಾವುದೇ ಬಾಹ್ಯ, ಅನ್ಯ ವ್ಯಕ್ತಿಗಳಿಗೆ ಹಾಗೂ ಎಲ್ಲಾ ಮಾಧ್ಯಮದವರಿಗೆ ಪ್ರವೇಶ ನಿಷೇಧಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಪೋನ್ ಬಳಸಲು ಮಾತ್ರ ಅನುಮತಿ ನೀಡಲಾಗಿದ್ದು, ಸದರಿ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಪೋನ್ನನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್