ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿ ವಿಸ್ತರಣೆ
ಹೊಸಪೇಟೆ, 23 ಮೇ (ಹಿ.ಸ.) : ಆ್ಯಂಕರ್ : ಶ್ರೀನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ. ಮೊದಲನೇಯ ಹಂತ ಮನೆಮನೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿ ವಿಸ್ತರಣೆ


ಹೊಸಪೇಟೆ, 23 ಮೇ (ಹಿ.ಸ.) :

ಆ್ಯಂಕರ್ : ಶ್ರೀನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಮೊದಲನೇಯ ಹಂತ ಮನೆಮನೆ ಭೇಟಿ ಸಮೀಕ್ಷೆಯನ್ನು ಮೇ.25 ರವರೆಗೆ ವಿಸ್ತರಿಸಲಾಗಿದೆ. ಎರಡನೇ ಹಂತ ವಿಶೇಷ ಶಿಬಿರ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಮೇ.26 ರಿಂದ ಮೇ.28 ರವರೆಗೆ ಮರುನಿಗದಿಪಡಿಸಲಾಗಿದೆ. ಮೂರನೇ ಹಂತ ಅನ್‌ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮೇ.19 ರಿಂದ ಮೇ.28 ರವರೆಗೆ ನಿಗದಿಪಡಿಸಲಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಮೀಕ್ಷೆಯ ಕುರಿತು ಯಾವುದೇ ಮಾಹಿತಿಗಳಿದ್ದಲ್ಲಿ ಆಯಾ ವ್ಯಾಪ್ತಿಯ ಕಂಟ್ರೋಲ್ ರೂಂ ಅಥವಾ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬೇಕಿದೆ.

ನೋಡಲ್ ಅಧಿಕಾರಿಗಳು ವಿವರ : ಜಿಲ್ಲಾ ನೋಡಲ್ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ, ಜಿಲ್ಲಾ ಅಧಿಕಾರಿ, ಹಿಂದುಳಿದ ಕಲ್ಯಾಣ ಇಲಾಖೆ, 9141827465, ವಿಜಯನಗರ ನೋಡಲ್ ಅಧಿಕಾರಿ ರಮೇಶ್ 8095002829, ಹೊಸಪೇಟೆ ನಜೀಮಾ ಭಾನು 9108777499, ಹಗರಿಬೊಮ್ಮನಹಳ್ಳಿ ಆನಂದ ವೈ.ಡೊಳ್ಳಿನ 9901980762, ಕೂಡ್ಲಿಗಿ ಶಾಹೇಖಾ ಅಹ್ಮದಿ 8105909630, ಹಡಗಲಿ ಜ್ಯೋತಿ 9482608061, ಹರಪನಹಳ್ಳಿ ಗಂಗಪ್ಪ ಎಸ್.ಆರ್. 9739094433 ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande