ರಾಯಚೂರು, 23 ಮೇ (ಹಿ.ಸ.) :
ಆ್ಯಂಕರ್ : ಜನಪರ ಕಾರ್ಯಕ್ರಮಗಳಿಗಾಗಿ ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ 40 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಜಿಲ್ಲಾ ಸಮುದಾಯ ಕೇಂದ್ರ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದು ಸ್ವಾಗತಾರ್ಹ. ಇಂತಹ ಸಮಯ ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ಜಿಲ್ಲೆಗೆ 40 ಕೋಟಿ ವೆಚ್ಚದಲ್ಲಿ ಜಿಲ್ಲಾ ಕೇಂದ್ರ ಸಮುದಾಯ ಭವನ ನಿರ್ಮಾಣಕ್ಕೆ ತಿರ್ಮಾನಿಸಲಾಗಿದೆ.
ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಾರ್ಯಕ್ರಮದ ಆಯೋಜಕರುಗಳಿಗೆ ಬಹಾಳ ತೊಂದರೆಯಾಗುತ್ತಿತ್ತು. ಜಿಲ್ಲೆಯಲ್ಲಿ ದೊಡ್ಡದಾದ ಸರಕಾರಿ ಸಮುದಾಯ ಭವನ ಇಲ್ಲದಿರುವುದರಿಂದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ವೆಚ್ಚವನ್ನು ಭರಿಸಿ ಖಾಸಗಿ ಭವನಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿತ್ತು. ದುಂದು ವೆಚ್ಚವನ್ನು ತಪ್ಪಿಸಲು ಹಾಗೂ ಜಿಲ್ಲೆಯ ಕಲಾ ಪ್ರತಿಭೆಗಳ ಕಲೆ, ಮನೋರಂಜನೆ, ಸಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಡು-ನುಡಿ ಉಳಿಯುವುದಾಗಿ ಸರ್ಕಾರ ಜಿಲ್ಲೆಗೆ ಜಿಲ್ಲಾ ಕೇಂದ್ರ ಸಮುದಾಯ ಭವನ ಘೋಷಿಸಿರುವುದು ಸಂತಸ ತಂದಿದೆ ಎಂದರು.
ಅಲ್ಲದೆ ಈ ಜಿಲ್ಲಾ ಸಮುದಾಯ ಭವನ ನಿರ್ಮಾಣದಿಂದ ಜಿಲ್ಲೆಯ ಸರ್ಕಾರಿ ಇಲಾಖೆಗಳಿಂದ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಹಾಗೂ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು, ಆಕಾಡಮಿಗಳ ಕಾರ್ಯಕ್ರಮಗಳು, ಉಚಿತ ವೈದ್ಯಕೀಯ ಶಿಬಿರಗಳು ಸಂಬಂಧಿತ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್