ಕಿಶ್ತ್ವಾರ್ ಎನ್‌ಕೌಂಟರ್‌ : ನಾಲ್ವರು ಭಯೋತ್ಪಾದಕರನ್ನು ಸುತ್ತುವರೆದ ಭದ್ರತಾ ಪಡೆಗಳು
ಕಿಸ್ತ್ವಾರ್, 23 ಮೇ (ಹಿ.ಸ.) : ಆ್ಯಂಕರ್ : ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛತ್ರು ಪ್ರದೇಶದ ಸಿಂಗ್‌ಪೋರಾ ಅರಣ್ಯದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಭಾರಿ ಕಾರ್ಯಾಚರಣೆ ಮುಂದುವರೆದಿದೆ. ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾ ಯೋಧ ಹುತಾತ್ಮರಾದರೆ, ಮತ್ತೊಬ್ಬ ಗಂಭೀರವಾಗ
Encounter


ಕಿಸ್ತ್ವಾರ್, 23 ಮೇ (ಹಿ.ಸ.) :

ಆ್ಯಂಕರ್ : ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛತ್ರು ಪ್ರದೇಶದ ಸಿಂಗ್‌ಪೋರಾ ಅರಣ್ಯದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಭಾರಿ ಕಾರ್ಯಾಚರಣೆ ಮುಂದುವರೆದಿದೆ.

ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾ ಯೋಧ ಹುತಾತ್ಮರಾದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಲ್ವರು ಭಯೋತ್ಪಾದಕರು ಸುತ್ತುವರೆದಿರುವ ಶಂಕೆಯಿದ್ದು, ಇವರಲ್ಲಿ ಪಹಲ್ಗಾಮ್ ದಾಳಿಯಲ್ಲಿ ಭಾಗವಹಿಸಿದ್ದವರೂ ಇರಬಹುದು ಎಂದು ಶಂಕಿಸಲಾಗಿದೆ.

ಡ್ರೋನ್ ಮತ್ತು ಹೆಲಿಕಾಪ್ಟರ್‌ಗಳ ನೆರವಿನಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಭದ್ರತಾ ಪಡೆಯನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಹಿರಿಯ ಸೇನಾ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande