ರಾಯಚೂರು, 23 ಮೇ (ಹಿ.ಸ.) :
ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ಆವರಣದಲ್ಲಿ ಮೇ.25ರ ಬೆಳಿಗ್ಗೆ 10 ಗಂಟೆಗೆ ಮುಂಗಾರು ಬೀಜ ದಿನೋತ್ಸವ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿವಿಯ ಬೀಜ ಘಟಕದ ವಿಶೇಷಾಧಿಕಾರಿ ಡಾ.ಅರುಣಕುಮಾರ್ ಹೊಸಮನಿ ಅವರು ತಿಳಿಸಿದ್ದಾರೆ.
ಮುಂಗಾರು ಬೀಜ ದಿನೋತ್ಸವ-2025ರ ಕಾರ್ಯಕ್ರಮದಲ್ಲಿ ಮುಂಗಾರು ಬೆಳೆಗಳ ಬಗ್ಗೆ ಸಮಗ್ರ ತಾಂತ್ರಿಕ ಮಾಹಿತಿ, ಸುಧಾರಿತ ಬೀಜೋತ್ಪಾದನಾ ಮತ್ತು ರೈತರ ಸಹಬಾಗಿತ್ವದ ಬೀಜೋತ್ಪಾದನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ವಿವಿಧ ವಿಷಯ ತಜ್ಞರು ಮತ್ತು ರೈತರ ಜೊತೆ ಚರ್ಚೆ, ಮುಂಗಾರು ಬೆಳೆಗಳ ಸುಧಾರಿತ ತಳಿಗಳ ಬೀಜ, ಜೈವಿಕ ಗೊಬ್ಬರ, ಕೀಟನಾಶಕಗಳು, ಅರಣ್ಯ, ತೋಟಗಾರಿಕೆ ಗಿಡಗಳ ಪ್ರದರ್ಶನ ಮತ್ತು ಮಾರಾಟ ಕುರಿತು ಮಾಹಿತಿ ನೀಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿವಿಯ ಬೀಜ ಘಟಕದ ವಿಶೇಷಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್