ಬಳ್ಳಾರಿ, 24 ಮೇ (ಹಿ.ಸ.) :
ಆ್ಯಂಕರ್ : ಹಿರಿಯ ಲೆಕ್ಕಪರಿಶೋಧಕ, ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ವೀರಶೈವ ಸಮಾಜದ ಮುಖಂಡರೂ ಆಗಿದ್ದ ಟಿ.ಸಿ. ಗೌಡ (87) ಅವರು ಶನಿವಾರ ಬೆಳಗ್ಗೆ ವಯೋಸಹಜ ಕಾರಣಗಳಿಂದಾಗಿ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಸಂಖ್ಯೆಯ ಬಂಧುವರ್ಗ, ಆಪ್ತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಸಹಕಾರಿ ಕ್ಷೇತ್ರದ ಆಡಿಟ್ನಲ್ಲಿ ಖ್ಯಾತರಾಗಿದ್ದ ಟಿ.ಸಿ. ಗೌಡ ಅವರು, ಬಳ್ಳಾರಿ ಜಿಲ್ಲೆಯ ಅತ್ಯಂತ ಅನುಭವಿ ಲೆಕ್ಕಪರಿಶೋಧಕರಾಗಿ ಗುರುತಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆಯು ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು, ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಆಜೀವ ಸದಸ್ಯರು ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ.
ವಿವರಗಳಿಗಾಗಿ : ಟಿ.ಸಿ. ವಿರೂಪಾಕ್ಷಗೌಡ, 94496 20894 ಅವರಿಗೆ ಸಂಪರ್ಕಿಸಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್