ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಕಾವೇರಿ' ಮಾತೆಗೆ ಗೌರವ ಸಮರ್ಪಿಸಲು ಗಂಗಾ ಆರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ವರ್ಷದ ದಸರಾ ಸಂದರ್ಭದಲ್ಲೇ ಮಂಡ್ಯ ಜಿಲ್ಲೆ ಕೃಷ್ಣರಾಜ ಸಾಗರದ (ಕೆಆರ್ಎಸ್) ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಇಂದು ವಿಧಾನ ಸೌಧದಲ್ಲಿ ಸಭೆ ನಡೆಸಿದ ಅವರು ಕಾರ್ಯಕ್ರಮದ ಪೂರ್ವಸಿದ್ಧತೆಯ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಪ್ರಮುಖರೊಂದಿಗೆ ಚರ್ಚಿಸಿ ಸೂಕ್ತ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa