ಬಳ್ಳಾರಿ, 24 ಮೇ (ಹಿ.ಸ.) :
ಆ್ಯಂಕರ್ : ಪ್ರತಿಯೊಂದು ಸಮಸ್ಯೆಯೂ ಹೊಸ ಆವಿಷ್ಕಾರಕ್ಕೆ ದಾರಿಯಾಗಬಲ್ಲದು ಎಂದು ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಮುನಿರಾಬಾದ್ ಕೇಂದ್ರದ ಅಧ್ಯಕ್ಷ ಡಾ. ಎಸ್.ಎಂ. ಶಶಿಧರ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಲಜಿನ (ಆರ್.ವೈ.ಎಂ.ಇ.ಸಿ.) ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ ಮತ್ತು ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಇಂಡಿಯಾ), ಮುನಿರಾಬಾದ್ ಕೇಂದ್ರದ ಸಹಯೋಗದಲ್ಲಿ ಶನಿವಾರ ಪ್ರಾರಂಭವಾದ ಮೂರು ದಿನಗಳ `ಸಂಶೋಧನಾ ವಿಧಾನಗಳು' ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಮಾಲಿನ್ಯದ ಸಮಸ್ಯೆ ಎಲೆಕ್ಟ್ರಿಕ್ ವಾಹನಗಳ ಸಂಶೋಧನೆಗೆ ಪ್ರೇರಣೆ ನೀಡಿತು. ಅಂಗವಿಕಲರಿಗೆ ನಡೆದಾಡುವ ಕಷ್ಟವನ್ನು ಪರಿಹರಿಸಲು ವ್ಹೀಲ್ಚೇರ್ ಆವಿಷ್ಕಾರಗೊಂಡಿತು. ಪ್ರತಿಯೊಂದು ಆವಿಷ್ಕಾರವೂ ನಿರ್ಧಿಷ್ಟವಾದ ಸಮಸ್ಯೆಯಿಂದ ಉತ್ತರವಾಗಿ ಪ್ರೋತ್ಸಾಹದ ರೂಪದಲ್ಲಿ ಅಭಿವೃದ್ಧಿ ಹೊಂದುತ್ತದೆ ಎಂದರು.
ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ನ ಕಾರ್ಯದರ್ಶಿ ಡಾ. ಶರತ್ ಕುಮಾರ್ ಅವರು, ಸಂಶೋಧನೆಗೆ ನೆರವು ನೀಡಲು ಅನೇಕ ಸಂಸ್ಥೆಗಳಿವೆ. ಸಂಶೋಧನೆಗಳ ಪ್ರಾಯೋಜಕತ್ವದ ಸಂಸ್ಥೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳು ಕೇವಲ ಅಂಕಗಳಿಗಾಗಿ ಇರದೇ, ಭವಿಷ್ಯದ ತಂತ್ರಜ್ಞಾನದ ತಳಹದಿಯಾಗಬೇಕು ಎಂದರು.
ಉಪ ಪ್ರಾಂಶುಪಾಲೆ ಡಾ. ಸವಿತಾ ಸೋನೋಳಿ ಅವರು, ಯುವ ಸಂಶೋಧಕರಿಗೆ ಕಾರ್ಯಾಗಾರಗಳು ದಾರಿದೀಪ. ಸಂಶೋಧನೆಯ ಅವಕಾಶಗಳು ಎಲ್ಲೆಡೆ ಇವೆ. ಆದರೆ, ಆವಿಷ್ಕಾರಕ ದೃಷ್ಟಿಯ ಅಗತ್ಯವಿದೆ ಎಂದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ, ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಡಾ. ಕಮ್ಮಾರ ಕಿಶೋರ್ ಕುಮಾರ್ ಹಾಗೂ ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ. ವೀರಭದ್ರಪ್ಪ ಆಲಗೂರು ಮಾತನಾಡಿದರು.
ಕು. ಕೀರ್ತನಾ ಪ್ರಾರ್ಥನೆ ಸಲ್ಲಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಕೋರಿ ನಾಗರಾಜ್ ಸ್ವಾಗತ ಕೋರಿದರು. ಕಾರ್ಯಕ್ರಮದ ಸಂಯೋಜಕ ಡಾ. ಚಂದ್ರಗೌಡ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ. ಕೆ.ಮಂಜುನಾಥ ಮತ್ತು ಎಂ. ಬಾಲಾಜಿ ಅತಿಥಿಗಳ ಪರಿಚಯ ಮಾಡಿದರು. ಅಚ್ಯುತಾನಂದ ಕೆ.ಬಿ. ಅವರು ವಂದನಾರ್ಪಣೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್