ಸೋಮವಾರ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ
ಬಳ್ಳಾರಿ, 24 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ಕುಡಿಯುವ ನೀರು, ಒಳ ಮತ್ತು ಹೊರ ಚರಂಡಿ, ರಸ್ತೆಗಳು ಸೇರಿ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯು ಮೇ 26ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದೆ
ಬಳ್ಳಾರಿ : ಮೇ 26ರ ಸೋಮವಾರ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ


ಬಳ್ಳಾರಿ : ಮೇ 26ರ ಸೋಮವಾರ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ


ಬಳ್ಳಾರಿ, 24 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದ ಕುಡಿಯುವ ನೀರು, ಒಳ ಮತ್ತು ಹೊರ ಚರಂಡಿ, ರಸ್ತೆಗಳು ಸೇರಿ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯು ಮೇ 26ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದೆ.

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಸೋಮಶೇಖರ ಗೌಡ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿ, ನಗರದಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಬೆರೆಯದಂತೆ ತುರ್ತಾಗಿ ಕ್ರಮ ಕೈಗೊಲು, ನಗರದ ಎಲ್ಲಾ ಹೊರ ಚರಂಡಿಗಳಲ್ಲಿ ತುಂಬಿರುವ ಹೂಳನ್ನು ತಕ್ಷಣವೇ ತೆಗೆದು ಸ್ವಚ್ಛಗೊಳಿಸಲು, ನಗರದಲ್ಲಿ ಸಣ್ಣ ಮಳೆ ಬಂದರೂ ರಸ್ತೆಗಳಲ್ಲಿ ಹೊಂಡುಗಳು ಬೀಳುತ್ತಿರುವುದನ್ನು ತಪ್ಪಿಸಲು ಹೋರಾಟ ನಡೆಸಲಾಗುತ್ತದೆ ಎಂದರು.

ಬಳ್ಳಾರಿ ನಗರಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಮತ್ತು ನಗರದಲ್ಲಿ ರಸ್ತೆ ಅಪಘಾತಕ್ಕೆ ಕಾರಣವಾಗುತ್ತಿರುವ

ಬೀದಿ ನಾಯಿ, ಬೀಡಾಡಿ ದನಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು, ನಗರಕ್ಕೆ ಅವಶ್ಯಕವಾದ ವರ್ತುಲ ರಸ್ತೆಯನ್ನು ತುರ್ತಾಗಿ ಪೂರ್ಣಗೊಳಿಸಲು, ಹಗಲಿನಲ್ಲಿ ಭಾರಿ ವಾಹನಗಳ ನಗರ ಪ್ರವೇಶಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಅನವಶ್ಯಕವಾಗಿ - ಅವೈಜ್ಞಾನಿಕವಾಗಿ ನಡೆಯುತ್ತಿರುವ ವೃತ್ತಗಳ ನಿರ್ಮಾಣ, ಸಾರ್ವಜನಿಕರ ಹಣದ ದುಂದುವೆಚ್ಚ, ಅನಾರೋಗ್ಯಕರ ವಾತಾವರಣಗಳ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳನ್ನು ದಿಕಕುತಪ್ಪಿಸುತ್ತಿದ್ದು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು. ಇಲ್ಲವೇ ಜನರ ವಿರೋಧವನ್ನು ಎದುರಿಸಬೇಕು ಎಂದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಸಲಹೆಗಾರರಾದ ನರಸಣ್ಣ, ಮುರ್ತುಜಾ ಸಾಬ್, ಸಮಿತಿ ಸದಸ್ಯರಾದ ಗುರುರಾಜ್, ಡಾ. ಎನ್. ಪ್ರಮೋದ್, ಶಾಂತಾ, ನಾಗರತ್ನ, ಸುರೇಶ್, ಅಂತೋನಿ, ವಿದ್ಯಾ ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande