ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿ ಸಭೆ
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜಯಂತಿ ಪರ‍್ವಭಾವಿ ಸಭೆ
ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾಸ್ತಿ ವೆಂಕಟೇಶ್ ಅಯ್ಯಾಂಗಾರ್ ಜಯಂತಿಯ ಬಗ್ಗೆ ಪರ‍್ವಭಾವಿ ಸಭೆ ನಡೆಸಿದರು.


ಕೋಲಾರ, ಮೇ ೨೪(ಹಿ.ಸ) :

ಆ್ಯಂಕರ್ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ೧೩೪ ನೇ ಜಯಂತಿಯ ಅಂಗವಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಆಯೋಜಿಸಿದ್ದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ ಕನ್ನಡದ ಸಣ್ಣ ಕಥೆಗಳ ಜನಕರೆಂದೇ ಖ್ಯಾತಿ ಹೊಂದಿದ್ದ ಮಾಸ್ತಿ ಅವರು ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಕನ್ನಡವನ್ನು ಹೃದಯ ಭಾಷೆಯಾಗಿ ಜೀವಂತ ವಿರಿಸಿಕೊಂಡವರು. ಮಾಸ್ತಿ ಕನ್ನಡದ ಆಸ್ತಿ ಎನಿಸಿಕೊಂಡಿದ್ದ ಕೇವಲ ಸಾಹಿತ್ಯ ಕೃಷಿಯಿಂದಲ್ಲ ಕನ್ನಡದ ಮನಸ್ಸುಗಳನ್ನು, ಲೇಖಕರನ್ನು, ಕವಿಗಳನ್ನು ಘೋಷಿಸಿ ಕನ್ನಡದ ಅಸ್ಮಿತೆಯನ್ನು ಎತ್ತರಕ್ಕೆ ಏರಿಸಿದ ಕಾರಣದಿಂದ ಮೈಸೂರು ರ‍್ಕಾರದ ಅಸಿಸ್ಟೆಂಟ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ ಎಂದರು.

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ೧೩೪ ನೇ ಜಯಂತಿ ಕರ‍್ಯಕ್ರಮವನ್ನು ಜೂನ್ ೬ ರಂದು ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಆಯೋಜಿಸಲಾಗುತ್ತದೆ. ಮಾಸ್ತಿ ಅವರ ಮನೆಯ ಆವರಣದಲ್ಲಿ ದಾನಿಗಳು ನೀಡಿರುವಂತಹ ಪುತ್ಥಳಿ ಅನಾವರಣ ಮಾಡಿ ನಂತರ ಸ್ತಬ್ಧಚಿತ್ರ ಗಳ ಮೆರವಣಿಗೆಯನ್ನು ೧೦.೩೦ ಚಾಲನೆ ನೀಡುವುದು ನಂತರ ೧೧.೩೦ ರಿಂದ ೧೨.೩೦ ರವರಿಗೆ ಮಕ್ಕಳ ಕವಿಗೋಷ್ಠಿ ನಡೆಸುವುದು ನಂತರ ಮದ್ಯಾಹ್ನ ೧ ಗಂಟೆಗೆ ವೇದಿಕೆ ಕರ‍್ಯಕ್ರಮವನ್ನು ಹಮ್ಮಿಕೊಂಡಿದ್ದು ಜಿಲ್ಲೆಯ ಉಸ್ತುವಾರಿ ಸಚಿವರು,ಶಾಸಕರು, ಸಂಸದರು,ಜನಪ್ರತಿ ನಿಧಿಗಳು ಕರ‍್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಕವಿಗೋಷ್ಠಿ ಮಾಡಲು ಸಮಿತಿಯನ್ನು ರಚನೆ ಮಾಡಿ ತಾಲ್ಲೂಕು ಮಟ್ಟದ ಮಕ್ಕಳಿಗೆ ಮರ‍್ಗರ‍್ಶನವನ್ನು ನೀಡಬೇಕಾಗಿದೆ ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನರ‍್ದೇಶಕ ಅಶೋಕ್ ಛಲವಾದಿ, ಸಹಾಯಕ ನರ‍್ದೇಶಕರಾದ ವಿಜಯಲಕ್ಷ್ಮಿ, ಮಾಲೂರು ತಹಶೀಲ್ದಾರ್ ರೂಪ, ಟ್ರಸ್ಟಿಗಳಾದ ವೆಂಕಟಾಚಲಪತಿ, ಕನ್ನಡ ಸಾಹಿತ್ಯ ಪರಿಷತ್ ಡಾ.ಶಂಕರಪ್ಪ ಭಾಗವಹಿಸಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾಸ್ತಿ ವೆಂಕಟೇಶ್ ಅಯ್ಯಾಂಗಾರ್ ಜಯಂತಿಯ ಬಗ್ಗೆ ಸಭೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande