ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಮತದಾರರು ಆಕ್ರೋಶ ವ್ಯಕ್ತಪಡಿಸಿ, ಅಧಿಕಾರದಿಂದ ದೂರವಿಡುವ ಮುಕ್ತ ಮನಸ್ಸಿನಲ್ಲಿದ್ದಾರೆ ಎನ್ನುವುದು ಸಮೀಕ್ಷೆಯ ಮೂಲಕ ಬಹಿರಂಗವಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಹೇಳಿದೆ.
ಪೀಪಲ್ಸ್ ಪಲ್ಸ್ ಆರ್ಗನೈಸೇಷನ್ ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಪಕ್ಷವು ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಯು ಬಿಜೆಪಿಗೆ 136 ರಿಂದ 159 ಸೀಟುಗಳು ಸಿಗಬಹುದೆಂದು ಅಂದಾಜಿಸಿದ್ದರೆ ಕಾಂಗ್ರೆಸ್ ಪಕ್ಷಕ್ಕೆ 62 ರಿಂದ 82 ಸ್ಥಾನಗಳಿಗೆ ಸೀಮಿತವಾಗಬಹುದು ಎಂದು ಅಂದಾಜಿಸಿದೆ.
ಕಾಂಗ್ರೆಸ್ ಸರ್ಕಾರದ ವಿಪರೀತ ಬೆಲೆ ಏರಿಕೆ ನೀತಿ, ಭ್ರಷ್ಟಾಚಾರ, ದುರಾಡಳಿತ, ಅಭಿವೃದ್ಧಿ ಶೂನ್ಯ ಆಡಳಿತದಿಂದಾಗಿ ರಾಜ್ಯ ಅಧೋಗತಿಗೆ ತಲುಪಿದೆ. ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಯು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಡಲಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa