ಪಹಲ್ಗಾಮನಲ್ಲಿ ಮೃತಪಟ್ಟ ಮಂಜುನಾಥ ರಾವ್ ನಿವಾಸಕ್ಕೆ ಅಸ್ಸಾಂ ಸಚಿವರ ಭೇಟಿ
ಶಿವಮೊಗ್ಗ, 25 ಮೇ (ಹಿ.ಸ.) : ಆ್ಯಂಕರ್ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ರಾವ್ ನಿವಾಸಕ್ಕೆ ಭಾನುವಾರ ಅಸ್ಸಾಂ ಸಚಿವ ಬಿಮಲ್ ಬೋರಾಹ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಂಗಳೂರಿನಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಬಿ
Visit


ಶಿವಮೊಗ್ಗ, 25 ಮೇ (ಹಿ.ಸ.) :

ಆ್ಯಂಕರ್ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ರಾವ್ ನಿವಾಸಕ್ಕೆ ಭಾನುವಾರ ಅಸ್ಸಾಂ ಸಚಿವ ಬಿಮಲ್ ಬೋರಾಹ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬೆಂಗಳೂರಿನಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಬಿಮಲ್ ಬೋರಾಹ್, ವಿಜಯನಗರದ ಮಂಜುನಾಥ ರಾವ್ ಅವರ ಮನೆಗೆ ಭೇಟಿ ನೀಡಿ, ಮಂಜುನಾಥ ರಾವ್ ಆವರ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು. ನಂತರ ರಾವ್ ಅವರ ತಾಯಿ ಸುಮತಿ, ಪತ್ನಿ ಪಲ್ಲವಿ ಹಾಗೂ ಮಗ ಅಭಿರಾಮ್ ಅವರಿಗೆ ಸಾಂತ್ವನ ಹೇಳಿ, 5 ಲಕ್ಷ ಮೊತ್ತದ ಚೆಕ್ ಪರಿಹಾರವಾಗಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande