ನಂಜನಗೂಡು, 25 ಮೇ (ಹಿ.ಸ.) :
ಆ್ಯಂಕರ್ : ನಂಜನಗೂಡಿನ ವಿದ್ಯಾವರ್ಧಕ ಮೈದಾನದಲ್ಲಿಂದು ಸುತ್ತೂರು ಶ್ರೀ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರರ ಜಯಂತಿ ಮಹೋತ್ಸವ -2025 ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿ ಮಾತನಾಡಿ, ಕಾಯಕ ತತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಕಾಯಕಯೋಗಿ, ಸಮಾನತೆಯ ಸಮಾಜದ ಸೃಷ್ಟಿಗಾಗಿ ಹೋರಾಡಿದ ಸಾಮಾಜಿಕ ಹರಿಕಾರ, ಬಸವಣ್ಣನವರು ಅಂದಿಗೂ, ಇಂದಿಗೂ, ಎಂದೆಂದಿಗೂ ವಿಶ್ವಗುರುವಾಗಿ ಏಕೆ ನಿಲ್ಲುತ್ತಾರೆ ಎಂದರೆ ಅವರ ಕಾಯಕಕ್ರಾಂತಿ ಅನುಸರಿಸಿದವರು ಸ್ವಾಭಿಮಾನಿಗಳಾಗಿ ಎದ್ದುನಿಲ್ಲುತ್ತಾರೆ, ಜನರ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳುತ್ತಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa