ದಾವಣಗೆರೆ, 25 ಮೇ (ಹಿ.ಸ.) :
ಆ್ಯಂಕರ್ : ಮುಂಬರುವ ಜೂನ್ 5 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿ ಪ್ಲಾಸ್ಟಿಕ್ ಮುಕ್ತ ಕಚೇರಿ ಎಂದು ಘೋಷಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾದರಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಯ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು ವ್ಯಾಪ್ತಿಯ ಸು.100 ಮೀ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಇನ್ನಿತರೆ ತ್ಯಾಜ್ಯವನ್ನು ಸ್ವಚ್ಚಗೊಳಿಸಿ ನಗರಸಭೆಗೆ ನೀಡಲಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಮುಂತಾದೆಡೆ ಪ್ಲಾಸ್ಟಿಕ್ ಮಾರಾಟ ಅಥವಾ ಬಳಕೆ ಮಾಡುವುದು ಕಂಡು ಬಂದಲ್ಲಿ ಅಧಿಕ ದಂಡ ವಿಧಿಸುವುದಲ್ಲದೇ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa