ಗದಗ ಬಂದ್ ಗೆ ಅವಕಾಶವಿಲ್ಲ, ಸಾರ್ವಜನಿಕರು ಎಂದಿನಂತೆ ವ್ಯವಹಾರ ನಡೆಸಲಿ : ಎಸ್ಪಿ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ನಿಮಿತ್ಯವಾಗಿ ವ್ಯಾಪಾರ ಮಳಿಗೆ ಹಾಕಲಾಗಿದ್ದು, ಅನ್ಯ ರಾಜ್ಯದ ವ್ಯಾಪಾರಸ್ಥರನ್ನು ಕೈ ಬಿಟ್ಟು ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಸಂಘಟನೆ ಸೇರಿದಂತೆ ಸಂಘಟನೆಗಳು ಗದಗ ಬಂದ್ ಕರೆ ನ
ಪೋಟೋ


ಗದಗ, 25 ಮೇ (ಹಿ.ಸ.) :

ಆ್ಯಂಕರ್ : ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ನಿಮಿತ್ಯವಾಗಿ ವ್ಯಾಪಾರ ಮಳಿಗೆ ಹಾಕಲಾಗಿದ್ದು, ಅನ್ಯ ರಾಜ್ಯದ ವ್ಯಾಪಾರಸ್ಥರನ್ನು ಕೈ ಬಿಟ್ಟು ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಸಂಘಟನೆ ಸೇರಿದಂತೆ ಸಂಘಟನೆಗಳು ಗದಗ ಬಂದ್ ಕರೆ ನೀಡಿದ್ದವು. ಆದರೆ, ಮೇ 26ರಂದು ಸೋಮವಾರ ಯಾವುದೇ ಬಂದ್ ಇರುವುದಿಲ್ಲ. ಸಾರ್ವಜನಿಕರು ಎಂದಿನಂತೆ ತಮ್ಮ ವ್ಯಾಪಾರ, ವಹಿವಾಟುಗಳನ್ನು ನಡೆಸಬೇಕು ಅಂತ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಸ್ ನೇಮಗೌಡ ಹೇಳಿದರು.

ನಗರದ ಶಹರ ಪೊಲೀಸ್ ಠಾಣೆಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒತ್ತಾಯಪೂರ್ವಕ ಬಂದ್ ಯಾರೂ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಲು ಪ್ರಯತ್ನಿಸಿದರೇ ಅಂತವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಶಾಂತಯುತ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ, ಬಂದ್ ಮಾಡಿ ಹೊರಾಟ ಮಾಡಬಾರದು ಅಂತ ಎಚ್ಚರಿಕೆ ನೀಡಿದರು.

ಬಂದ್ ಮಾಡುವುದರಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಎಲ್ಲಾ ಸಂಘಟನೆಗಳು ಒಗ್ಗಟ್ಟಾಗಿ ಬಂದ್ ಮಾಡಿದರೆ ಯಾವುದೇ ತಕರಾರಿಲ್ಲ. ಆದರೆ, ಇಲ್ಲಿ ಒಂದು ಗುಂಪು ಪರವಾಗಿ ಹಾಗೂ ಮತ್ತೊಂದು ಗುಂಪು ವಿರೋಧವಾಗಿ ಇರುವುದರಿಂದ ಶಾಂತಿ ಭಂಗ ಆಗುವ ಸಾಧ್ಯತೆ ಹೆಚ್ಚಾಗಿದೆ. ಶಾಂತಿ ಕಾಪಾಡುವ ಹಿತ ದೃಷ್ಟಿಯಿಂದ ಮೇ 26 ರಂದು ಬೆಳಿಗ್ಗೆ 6:00 ಗಂಟೆಯಿಂದ ಸಾಯಂಕಾಲ 6:00 ವರೆಗೆ ಪ್ರತಿಬಂಧಕಾಜ್ಞೆ ಹೊರಡಿಸಲಾಗಿದೆ ಅಂತ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ ಇಲಾಖೆಯಿಂದ ಅವರಿಗೆ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈಗಲೂ ಅವರು ಶಾಂತಯುತ ಹೋರಾಟ ಮಾಡಿದರೆ ಅನುಕೂಲ ಮಾಡಿಕೊಡುತ್ತೇವೆ. ಜಾತ್ರಾ ಸಮಯದಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿ ಸುಗಮವಾಗಿ ನಡೆಯಲು ಅನುವು ಮಾಡಿಕೊಡಲಾಗಿದೆ. ಅಲ್ಲದೆ ನಗರಸಭೆ ಆ ಜಾಗ ಮಠಕ್ಕೆ ಸೇರಿದ್ದು ಅಂತ ಈಗಾಗಲೇ ತಿಳಿಸಿದೆ. ಈ ಎಲ್ಲ ವಿಚಾರ ಗಮನದಲ್ಲಿಟ್ಟುಕೊಂಡು ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಅಂತ ಎಂದರ.

ಗದಗ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಎಸ್ಪಿ ಬಿ ಎಸ್ ನೇಮಗೌಡ ತಿಳಿಸಿದ್ದಾರೆ. ‌ನಿಷೇದಾಜ್ಞೆ ಜಾರಿ ಇದ್ದರೂ ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಾಲ್ವರು ಡಿ.ಎಸ್.ಪಿ, ಹತ್ತಕ್ಕೂ ಹೆಚ್ಚು ಇನ್ಸ್ಪೆಕ್ಟರ್, ಎರಡು ಕೆ. ಎಸ್. ಆರ್. ಪಿ ತುಕಡಿ, ಡಿ. ಆರ್ ಸಿಬ್ಬಂದಿಗಳು ಸೇರಿದಂತೆ ಸುಮಾರು 200 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಎಂದಿನಂತೆ ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೋಡಗಿಕೊಳ್ಳಲಿ ಎಂದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande