ಮೈಸೂರು, 25 ಮೇ (ಹಿ.ಸ.) :
ಆ್ಯಂಕರ್ : ಬಸವಣ್ಣನವರು ಸಾರಿದ “ಕಾಯಕವೇ ಕೈಲಾಸ” ತತ್ವವನ್ನು ಅಳವಡಿಸಿಕೊಂಡರೆ ಬಡತನ ನಿವಾರಣೆಯಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಧುನಿಕ ಅನುಭವ ಮಂಟಪವು ಶರಣ ಸಂಸ್ಕೃತಿಯ ಪ್ರತೀಕವಾಗಿ ವಿಶ್ವಕುಟುಂಬತ್ವದ ಸಂದೇಶವನ್ನು ಹರಡಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa