ಮಧ್ಯಪ್ರದೇಶಕ್ಕೆ ಕೇಂದ್ರ ಕೃಷಿ ಸಚಿವರ ಭೇಟಿ
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದಿನಿಂದ ಎರಡು ದಿನ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸೆಹೋರ್ ಜಿಲ್ಲೆಯ ಭೈರುಂಡಾ, ಲಡ್ಕುಯಿ ಹಾಗೂ ಇತರ ಪ್ರದೇಶಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Chvan


ನವದೆಹಲಿ, 25 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದಿನಿಂದ ಎರಡು ದಿನ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸೆಹೋರ್ ಜಿಲ್ಲೆಯ ಭೈರುಂಡಾ, ಲಡ್ಕುಯಿ ಹಾಗೂ ಇತರ ಪ್ರದೇಶಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇಂದು ಸಂಜೆ ಲಡ್ಕುಯಿಯಲ್ಲಿ ಪ್ರಧಾನಿ ಆವಾಸ್ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ, ರೈತ ವಿಚಾರ ಸಂಕಿರಣ, ಮಹಿಳಾ ಸಬಲೀಕರಣ ಹಾಗೂ ಉದ್ಯೋಗ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಬಿಜ್ಲಾ ಜೋಡ್, ಜೇತಾಜಿ ಅಕಾಡೆಮಿ ಮತ್ತು ಭೈರುಂಡಾದಲ್ಲಿ ಜಲ ಸಂರಕ್ಷಣೆ, ಸ್ವಚ್ಛತೆ, ಯುವ ಸಂಸತ್ತು ಹಾಗೂ ನಗರ ಯೋಜನೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande